Monthly Archives: ಜೂನ್, 2014
ಕುಚೇಲನ ಮನೆಗೆ ಕೃಷ್ಣ ಬಂದ…
ಈಗ ನೋಡಿದರೆ ಇದೆಲ್ಲ ಒಂದು ಅಚ್ಚರಿ ಅಂದೆನ್ನಿಸುತ್ತದೆ! ಅದು ಕಳೆದ ವರ್ಷದ ಜನವರಿ ತಿಂಗಳು. ಎಂದಿನಂತೆ ಆ ಮುಂಜಾನೆ ದಿನಪತ್ರಿಕೆಯನ್ನು ತೆರೆದಾಗ ಮೊದಲ ಪುಟದಲ್ಲೇ ಒಂದು ಸುದ್ದಿ ಗಮನಸೆಳೆಯಿತು. ಅದರ ಶೀರ್ಷಿಕೆ ಹೀಗಿತ್ತು: “ಗ್ರಾಮವಾಸ್ತವ್ಯದಿಂದ ‘ವಾಸ್ತವ್ಯ’ವನ್ನೇ ಕಳೆದುಕೊಂಡವರು!ಹ್” ಈ ಮೂರೂವರೆ ಪದಗಳು ನನ್ನ ಈವತ್ತಿನ ‘ಡಿಸೆಂಬರ್-1’ ಚಲನಚಿತ್ರಕ್ಕೆ ನಾಂದಿ ಹಾಡಿದವು!ಪತ್ರಿಕೆಯ ಆ ವರದಿಯಲ್ಲಿ ಉತ್ತರಕರ್ನಾಟಕದ ಪುಟ್ಟ ಹಳ್ಳಿಯೊಂದರಲ್ಲಿ ಒಂದು ಬಡ ಕುಟುಂಬ ತಾನು ಬದುಕಿ ಬಾಳಿದ ಊರನ್ನೇ ಹೇಗೆ ತೊರೆದು ಹೋಗಬೇಕಾಯಿತು ಎನ್ನುವುದರ ಬಗ್ಗೆ ಬರೆಯಲಾಗಿತ್ತು. ತತ್ತ್ಕ್ಷಣ …